ವಿಜಯಪುರ: ಸಿಂದಗಿ ವಿಧಾನ ಉಪ ಚುನಾವಣೆಗೆ ಮೊದಲ ದಿನವಾದ ಶುಕ್ರವಾರ ಒಂದು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಚುನಾವಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಡಾ ಸುನೀಲ್ ಕುಮಾರ ಹಬ್ಬಿ ನಾಮಪತ್ರ ಸಲ್ಲಿಸಿದ ಮೊದಲ ಹುರಿಯಾಳುವಾಗಿದ್ದಾರೆ. ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದೆ.
ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮಹಾಲಯ ಅಮಾವಾಸ್ಯೆ ಬಳಿಕ ಅಂದರೆ ಅಕ್ಟೋಬರ್ 7 ಅಥವಾ 8ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಆದರೆ, ಆಡಳಿತರೂಢ ಬಿಜೆಪಿ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.