ADVERTISEMENT

ಸಿಂದಗಿ ಉಪ ಚುನಾವಣೆ: ಸಲ್ಲಿಕೆಯಾದ ಎಂಟೂ ನಾಮಪತ್ರ ಕ್ರಮಬದ್ದ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 14:30 IST
Last Updated 11 ಅಕ್ಟೋಬರ್ 2021, 14:30 IST
   

ವಿಜಯಪುರ: ಅ.30ರಂದು ನಡೆಯಲಿರುವ
ಸಿಂದಗಿ ವಿಧಾನಸಭಾ‌ ಉಪ ಚುನಾವಣೆಗೆ ಸಲ್ಲಿಕೆಯಾಗಿರುವ ಎಂಟೂ ಉಮೇದುವಾರರ ನಾಮಪತ್ರ ಕ್ರಮಬದ್ದವಾಗಿವೆ.

ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆದದ್ದು, ನಾಮಪತ್ರ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳ ನಾಮ ಪತ್ರ ಕ್ರಮಬದ್ಧವಾಗಿವೆ. ನಾಮಪತ್ರ ಹಿಂಪಡೆಯಲು ಅ.13 ಕೊನೆಯ ದಿನವಾಗಿದೆ.

ಕಾಂಗ್ರೆಸ್ ನ ಅಶೋಕ ಮನಗೂಳಿ, ಬಿಜೆಪಿಯ ರಮೇಶ ಭೂಸನೂರ, ಜೆಡಿಎಸ್ ನ ನಾಜಿಯಾ ಶಕೀಲ್ ಅಂಗಡಿ, ರಾಷ್ಟ್ರೀಯ ಸಮಾಜ ಪಕ್ಷದ ವಿಕ್ರಮ್ ಪಂಡಿತ, ಕರ್ನಾಟಕ ರಾಷ್ಟ್ರ ಸಮಿತಿಯ ಡಾ. ಡಾ.ಸುನೀಲ್ ಕುಮಾರ್ ಹೆಬ್ಬಿ ಹಾಗೂ ಪಕ್ಷೇತರ ಅಭ್ಯರ್ಥಿ ಗಳಾದ ಅಬ್ದುಲ್ ರೆಹಮಾನ್ ದುಂಡಸಿ, ಜಿಲಾನಿ ಮುಲ್ಲಾ ಮತ್ತು ದೀಪಿಕಾ ಎಸ್ ಅವರ ನಾಮಪತ್ರ ಕ್ರಮಬದ್ದವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.