ವಿಜಯಪುರ: ಡಿಸೆಂಬರ್ 1 ರಿಂದ 7 ರ ವರೆಗೆ ಅರಕೇರಿ ಶ್ರೀ ಅಮೋಘ ಸಿದ್ಧ ದೇವರ ಜಾತ್ರೆ ಹಾಗೂ ಗುಡ್ಡಾಪುರದ ದಾನಮ್ಮ ದೇವಿ ಜಾತ್ರೆ ನಡೆಯಲಿರುವುದರಿಂದ ಜಿಲ್ಲೆಯ ಯಾತ್ರಾರ್ಥಿಗಳಿಗಾಗಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಂಸ್ಥೆಯ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ವಿಜಯಪುರ ಘಟಕ 1ರ ವ್ಯವಸ್ಥಾಪಕರು 7760992263, ವಿಜಯಪುರ ಘಟಕ2ರ ವ್ಯವಸ್ಥಾಪಕರು 7760992264, ವಿಜಯಪುರ ಘಟಕ3ರ ವ್ಯವಸ್ಥಾಪಕರು 7760914008, ಇಂಡಿ 7760992265, ಸಿಂದಗಿ 7760992266, ಮುದ್ದೇಬಿಹಾಳ 7760992267, ತಾಳಿಕೋಟಿ 7760992268, ಬಸವನ ಬಾಗೇವಾಡಿ 7760992269, ವಿಜಯಪುರ ಕೇಂದ್ರ ಬಸ್ ನಿಲ್ದಾಣ 08352-251344, ವಿಜಯಪುರ ಕೇಂದ್ರ ಬಸ್ ನಿಲ್ದಾಣದಸಹಾಯಕ ಸಂಚಾರ ವ್ಯವಸ್ಥಾಪಕರು 7760992258 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.