ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣನ ಚಿತ್ರಕ್ಕೆ ಪುಷ್ಪರ್ಚನೆ ಹಾಗೂ ಪೂಜೆ ಮಾಡುವ ಮೂಲಕ ಮಂಗಳವಾರ ಶ್ರೀ ಕೃಷ್ಣ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಶ್ರೀಕೃಷ್ಣ ಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ, ನಿಂಗಪ್ಪ ಗೋಠೆ, ವಿಜಯಪುರ ತಹಶೀಲ್ದಾರ್ ಮೋಹನ್ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹಾಗೂ ಸಮಾಜದ ಮುಖಂಡರಾದ ಸೋಮನಗೌಡ ಕಲ್ಲೂರ, ಭೀಮರಾವ್ ಜಿಗಜಿಣಿಗಿ, ಅಡಿವೆಪ್ಪ ಸಾಲಗಲ್, ಫಯಾಜ್ ಕಲಾದಗಿ, ಗಿರೀಶ ಕುಲಕರ್ಣಿ, ಜಯಶ್ರೀ ಭಾರತಿ, ಕುಸುಮಾ ಪವಾರ, ಶಾಸ್ತ್ರೀ ಹೊಸಮನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೋವಿಡ್ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.