ADVERTISEMENT

'ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ' ಗೆ ಶಿಕ್ಷಕ ಸಂತೋಷ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 13:32 IST
Last Updated 1 ಜುಲೈ 2025, 13:32 IST
ಶಿಕ್ಷಕ ಸಂತೋಷ ಬಂಡೆ
ಶಿಕ್ಷಕ ಸಂತೋಷ ಬಂಡೆ   

ಇಂಡಿ: ತಾಲ್ಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರು 'ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.

ಅಮ್ಮ ಫೌಂಡೇಶನ್ ವತಿಯಿಂದ ಜುಲೈ 6ರಂದು ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಲಿರುವ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು  ಫೌಂಡೇಶನ್ ಸಂಚಾಲಕ ಕಬೂಲ ಕೊಕಟನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT