ADVERTISEMENT

ಕ್ಷಯಮುಕ್ತ ವಿಜಯಪುರ ಜಿಲ್ಲೆಗೆ ಶ್ರಮಿಸಿ: ಗೋವಿಂದ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 15:38 IST
Last Updated 8 ಸೆಪ್ಟೆಂಬರ್ 2021, 15:38 IST
ವಿಜಯಪುರ ಜಿ.ಪಂ. ಸಭಾ ಭವನದಲ್ಲಿ ಬುಧವಾರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಕಾರ್ಯದರ್ಶಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಸಿಇಒ ಗೋವಿಂದ ರೆಡ್ಡಿ ಉದ್ಘಾಟಿಸಿದರು
ವಿಜಯಪುರ ಜಿ.ಪಂ. ಸಭಾ ಭವನದಲ್ಲಿ ಬುಧವಾರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಕಾರ್ಯದರ್ಶಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಸಿಇಒ ಗೋವಿಂದ ರೆಡ್ಡಿ ಉದ್ಘಾಟಿಸಿದರು   

ವಿಜಯಪುರ: ದೇಶವನ್ನು 2025 ರೊಳಗೆ ‘ಕ್ಷಯಮುಕ್ತ ಭಾರತ’ ಮಾಡುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಿಂದ 20 ಪಟ್ಟಣ,ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದುಜಿ.ಪಂ ಸಿಇಒ ಗೋವಿಂದ ರೆಡ್ಡಿ ಹೇಳಿದರು.

ನಗರದ ಜಿ.ಪಂ. ಸಭಾ ಭವನದಲ್ಲಿ ಬುಧವಾರ ನಡೆದ 20 ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಕಾರ್ಯದರ್ಶಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿಗಳಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ನಿಮಿತ್ಯ ‘ಕ್ಷಯಮುಕ್ತ ಗ್ರಾಮ ಪಂಚಾಯಿತಿ’ ಎಂಬ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲರೂ ಕೂಡಿ ವಿಜಯಪುರ ಜಿಲ್ಲೆಯನ್ನು ಕ್ಷಯಮುಕ್ತವನ್ನಾಗಿ ಮಾಡುವಲ್ಲಿ ಶ್ರಮಿಸೋಣ ಎಂದರು.

ADVERTISEMENT

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಈರಣ್ಣ ಎಸ್.ಧಾರವಾಡಕರ, ‘ಕ್ಷಯಮುಕ್ತ ಗ್ರಾಮ ಪಂಚಾಯ್ತಿ’ ವಿಷಯದ ಕುರಿತು ತರಬೇತಿ ನೀಡಿದರು.

ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಡಾ. ಜೆಬುನ್ನಿಸಾಬೇಗಂ ಬೀಳಗಿ ಹಾಗೂ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಮತ್ತು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.