ADVERTISEMENT

ಸಕ್ಕರೆ ಕಾರ್ಖಾನೆ: ಯಂತ್ರಕ್ಕೆ ಸಿಲುಕಿ ದಿನಗೂಲಿ ಕೆಲಸಗಾರ ಸಾವು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 18:20 IST
Last Updated 2 ಡಿಸೆಂಬರ್ 2022, 18:20 IST
   

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಗ್ರಾಮದ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ

ಯಂತ್ರಕ್ಕೆ ಸಿಲುಕಿ ದಿನಗೂಲಿ‌ ಕೆಲಸಗಾರ ಸಿದ್ದಪ್ಪ ದೊಡಮನಿ (48) ಸಾವನಪ್ಪಿದ್ದಾರೆ.
ಮುದ್ದೇಬಿಹಾಳ ತಾಲ್ಲೂಕಿನ ಹಡಗಲಿ ಗ್ರಾಮದ ನಿವಾಸಿ ಸಿದ್ದಪ್ಪ ಸಾವಿಗೀಡಾದ ದಿನಗೂಲಿ ಕೆಲಸಗಾರ ಎಂದು ಗುರುತಿಸಲಾಗಿದೆ.

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಇಲ್ಲದೇ ಇರುವುದು ಘಟನೆಗೆ ಕಾರಣ ಎಂದು ಕೆಲಸಗಾರರು ಆರೋಪಿಸಿದ್ದಾರೆ.

ADVERTISEMENT

ಸಾವಿಗೀಡಾದ ದಿನಗೂಲಿ ನೌಕರನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು. ಮುದ್ದೇಬಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.