ADVERTISEMENT

ಚಕ್ರವರ್ತಿ ಸೂಲಿಬೆಲೆ ಜೈಲು ಕಂಬಿ ಎಣಿಸಬೇಕಾಗುತ್ತೆ: ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2023, 14:16 IST
Last Updated 4 ಜೂನ್ 2023, 14:16 IST
ಸಚಿವ ಎಂ.ಬಿ.ಪಾಟೀಲ
ಸಚಿವ ಎಂ.ಬಿ.ಪಾಟೀಲ   

ವಿಜಯಪುರ: ‘ಚಕ್ರವರ್ತಿ ಸೂಲಿಬೆಲೆ ಮತ್ತು ಸಂಘ ಪರಿವಾರದವರು ಕಳೆದ ನಾಲ್ಕು ವರ್ಷ ಹಿಜಾಬ್‌, ಹಲಾಲ್‌, ಆಜಾನ್‌ ಸೇರಿದಂತೆ ಪಠ್ಯಪುಸ್ತಕದಲ್ಲಿ ಮಾಡಿರುವ ಅನಾಹುತವನ್ನು ಸರಿಪಡಿಸುವ ಕೆಲಸ ಕಾಂಗ್ರೆಸ್‌ ಮಾಡಲಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಜನರ ಭಾವನೆ ಕೆರಳಿಸುವ ಪ್ರಯತ್ನ ನಡೆಯಿತೇ ಹೊರತು, ಜನರ ಬದುಕು ಕಟ್ಟಿಕೊಡುವ ಕೆಲಸ ಆಗಲಿಲ್ಲ. ಅಭಿವೃದ್ಧಿ ಕಾರ್ಯವನ್ನು ಸಂಪೂರ್ಣ ಕಡೆಗಣಿಸಲಾಗಿತ್ತು’ ಎಂದು ಆರೋಪಿಸಿದರು.

‘ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣಕ್ಕೆ ಕಾಂಗ್ರೆಸ್‌ ಸರ್ಕಾರ ಆದ್ಯತೆ ನೀಡಲಿದೆ. ರಾಜಕೀಯ ಲಾಭಕ್ಕೆ ದ್ವೇಷ ಬಿತ್ತುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.