ಮುದ್ದೇಬಿಹಾಳದ ಆಲಮಟ್ಟಿ ರಸ್ತೆಯಲ್ಲಿ ಆರಂಭಗೊಂಡಿರುವ ಬಿಎಎಸ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು
ಮುದ್ದೇಬಿಹಾಳ: ಆಲಮಟ್ಟಿ ರಸ್ತೆಯ ಬಿಎಎಸ್ ಇಂಟರ್ನ್ಯಾಶನಲ್ ಸ್ಕೂಲ್ನಲ್ಲಿ ಭಾನುವಾರ ಟ್ಯಾಲೆಂಟ್ ಅವಾರ್ಡ್ ಎಕ್ಸಾಂ ನಡೆಸಲಾಯಿತು.
ಶಿಕ್ಷಕ ಅಮರೇಶ ಪಾಟೀಲ ಮಾತನಾಡಿ, ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಓದಿದ ಕ್ಷಣವೇ ಉತ್ತರಿಸುವ ಬದಲು ತಾಳ್ಮೆಯಿಂದ ಉತ್ತರ ಬರೆಯಲು ಆರಂಭಿಸಬೇಕು. ಪ್ರಶ್ನೆ ಪತ್ರಿಕೆ ಸರಳವಾಗಿದ್ದರೂ ಉತ್ತರಿಸುವ ಅವಸರವಸರವಾಗಿ ಉತ್ತರಿಸಿದ್ದರಿಂದ ಪೂರ್ಣ ಅಂಕ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ ಎಂದರು.
ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ, ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ, ಪ್ರಾಚಾರ್ಯ ಸುಪರ್ಣದಾಸ ಇದ್ದರು. ಪರೀಕ್ಷೆಗೆ 700ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆಯ್ದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ಘೋಷಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.