ADVERTISEMENT

ತಾಂಬಾ | ಸಿಡಿಲು ಬಡಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ₹5 ಲಕ್ಷ ಪರಿಹಾರ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2024, 16:13 IST
Last Updated 14 ಏಪ್ರಿಲ್ 2024, 16:13 IST

ತಾಂಬಾ: ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಮಹಿಳೆ ಭಾರತಿ ಹಣಮಂತ ಕೆಂಗನಾಳ ಅವರ ಕುಟುಂಬಕ್ಕೆ ಸಿಂದಗಿ ಶಾಸಕ ಅಶೋಕ ಮನಗೂಳಿ ಮುಖ್ಯಮಂತ್ರಿ ಪರಿಹಾರ ಮತ್ತು ಪ್ರಕೃತಿ ವಿಕೋಪ ನಿಧಿ ಅಡಿಯಲ್ಲಿ ₹ 5 ಲಕ್ಷ  ತಕ್ಷಣ ನೀಡಲು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಹೇಳಿದರು.

ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಗ್ರಾಮ ಪಂಚಾಯತ ಅಧ್ಯಕ್ಷ ರಜಾಕ್ ಚಿಕ್ಕಗಸಿ, ಕಂದಾಯ ನೀರಕ್ಷಕರು ಹುಸೇನಿ ಗುನ್ನಾಪೂರ, ಗ್ರಾಮ ಆಡಳಿತಧಿಕಾರಿ ಎಮ್.ಎಸ್. ಮಾರಲಾಬಾವಿ, ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ರಾಚಪ್ಪ ಗಳೇದ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT