ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಒಂದು ತಾಸು ಧಾರಾಕಾರ ಮಳೆ ಸುರಿಯಿತು.
ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿರುಬಿಸಿಲು ಜನರನ್ನು ಹೈರಣಾಗಿಸಿತ್ತು. ಮಂಗಳವಾರ ಸುರಿದ ಮಳೆ ವಾತಾವರಣವನ್ನು ತಂಪಾಗಿಸಿತು.ಮಳೆಯಿಂದಬೆಳೆಗಳಿಗೆ ಅನುಕೂಲವಾಯಿತು.
ನಗರದ ಬಹುತೇಕ ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳಲ್ಲಿ ಜನ, ವಾಹನ ಸಂಚಾರಕ್ಕೆ ತೊಂದರೆಯಾಯಿತು. ರಸ್ತೆ, ತಗ್ಗು ಪ್ರದೇಶದಲ್ಲಿ ನೀರು ನಿಂತ ದೃಶ್ಯ ಕಂಡುಬಂದಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.