ADVERTISEMENT

ಶಿಕ್ಷಣದಿಂದ ದೇಶದ ಪ್ರಗತಿ: ಯಶವಂತರಾಯಗೌಡ 

ಹಿರೇಮಸಳಿ ಗ್ರಾಮದ ನೂತನ ಗ್ರಂಥಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 14:11 IST
Last Updated 9 ಜನವರಿ 2021, 14:11 IST
ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿದ್ದಪ್ಪ ಭೀಮರಾಯ ಕಲ್ಲೂರ ನೂತನ ಗ್ರಂಥಾಲಯವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿ ಮಾತನಾಡಿದರು
ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿದ್ದಪ್ಪ ಭೀಮರಾಯ ಕಲ್ಲೂರ ನೂತನ ಗ್ರಂಥಾಲಯವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿ ಮಾತನಾಡಿದರು   

ವಿಜಯಪುರ: ‘ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಹೀಗಾಗಿ ಶಾಸಕರ ನಿಧಿಯನ್ನು ಸಮುದಾಯ ಭವನಗಳಿಗೆ ಬದಲಾಗಿ ಶಿಕ್ಷಣಕ್ಕೆ ಮೀಸಲಿಡಲು ತೀರ್ಮಾನಿಸಿದ್ದೇನೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿದ್ದಪ್ಪ ಭೀಮರಾಯ ಕಲ್ಲೂರ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕರ ನಿಧಿ ₹2 ಕೋಟಿಯಲ್ಲಿ ₹ 70 ಲಕ್ಷಕ್ಕೂ ಅಧಿಕ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವೆ. ಮುಂದೆಯೂ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶಾಸಕರ ನಿಧಿ ಮೀಸಲಿಡುವೆ ಎಂದ ಅವರು ಹೇಳಿದರು.

ADVERTISEMENT

ಹಿರೇಮಸಳಿ ನೂತನ ಗ್ರಂಥಾಲಯಕ್ಕೆ ₹ 2 ಲಕ್ಷ ಮೊತ್ತದಲ್ಲಿ ಆಯ್ದ ಪುಸ್ತಕ ಖರೀದಿಸಿ ಕೊಡುವುದಾಗಿ ಭರವಸೆ ನೀಡಿದರು.

ಇಂಡಿ ವಿಧಾನಸಭೆ ಕ್ಷೇತ್ರ ಸರ್ವಾಂಗೀಣ ಪ್ರಗತಿ ಸಾಧಿಸುತ್ತಿದೆ. ಲಿಂಬೆ ಅಭಿವೃದ್ಧಿ ನಿಗಮ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯಿಂದಾಗಿ ಸಾಕಷ್ಟು ಅನುಕೂಲವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳುವೆ. ಗ್ರಾಮಸ್ಥರ ಮನವಿ ಮೇರೆಗೆ ಹಿರೇಮಸಳಿ ಹಳ್ಳದ‌ ಸೇತುವೆ ನಿರ್ಮಿಸುವ ಭರವಸೆ ನೀಡಿದರು.

ಮಾಜಿ ಶಾಸಕ ಆರ್.ಆರ್. ಕಲ್ಲೂರ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಶಾಸಕನಾಗಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿರುವೆ. ಇದೀಗ ಶಾಸಕ ಯಶವಂತರಾಯಗೌಡ ಪಾಟೀಲ ಆ ಅಭಿವೃದ್ಧಿ ಕಾರ್ಯ ಮುನ್ನಡೆಸುತ್ತಿದ್ದಾರೆ. ಅವರು ಇನ್ನೊಮ್ಮೆ ಶಾಸಕರಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮೆರೆಯಬೇಕು ಎಂದರು.

ಶರಣಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು.ಖ್ಯಾತ ವೈದ್ಯ ಡಾ.ಎಂ.ಎಸ್. ಕಲ್ಲೂರ,ಸಿದ್ರಾಯ ಭಾವಿಕಟ್ಟಿ, ಎಸ್. ಬಿ. ಕಲ್ಲೂರ, ಪುಂಡಲಿಕ ಕಪಾಲಿ, ಎಂ.ಐ. ಬಗಲಿ, ಪೀರು ಮನಮಿ, ಮಹಾದೇವಪ್ಪ ಏವೂರ, ಪರಶುರಾಮ ಭಾಸಗಿ, ಶಿಕ್ಷಕ ಐ.ಎಸ್. ಮಾಶಾಳ, ಪ್ರವೀಣ ಮನಮಿ, ಪಿಡಿಒ ಸಿದ್ರಾಮ ಸಿನಿಖೇಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.