ADVERTISEMENT

ಮನೆಗಳ್ಳನ ಬಂಧನ: ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 14:08 IST
Last Updated 20 ಜನವರಿ 2021, 14:08 IST

ವಿಜಯಪುರ: ತಾಲ್ಲೂಕಿನ ಡೊಮನಾಳ ತಾಂಡದಲ್ಲಿ ನವೆಂಬರ್ 22ರಂದು ಮನೆ ಬಾಗಿಲಿನ ಕೀಲಿ ಮುರಿದು, ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಡೊಮನಾಳ ತಾಂಡಾ 2ರ ಆರೋಪಿ ಕಿರಣ ರಾಠೋಡ(26) ಎಂಬಾತನನ್ನು ಬಂಧಿಸಿ, ಕಳವು ಮಾಡಿದ್ದ ₹ 6 ಲಕ್ಷ ಮೌಲ್ಯದ ಒಟ್ಟು 116 ಗ್ರಾಂ ತೂಕ ಚಿನ್ನಾಭರಣವನ್ನು ವಶಪಡಿಸಿಕೊಂಡು, ಆರೋಪಿಯನ್ನು ಕೋರ್ಟ್‌ಗೆ ಹಾಜರಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ವಿಜಯಪುರ ಗ್ರಾಮೀಣಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ಪಿಎಸ್‍ಐಆನಂದ ಠಕ್ಕಣ್ಣವನವರ, ಗ್ರಾಮೀಣ ಪಿಎಸ್ ಆರ್.ಎ.ದಿನ್ನಿ ಮತ್ತು ಸಿಬ್ಬಂದಿ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.