ADVERTISEMENT

ವಿಜಯಪುರ: ಚಿಕಿತ್ಸೆ ಸಿಗದೆ ಪರದಾಟ, ವ್ಯಕ್ತಿಗೆ ನೆರವಾದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 14:08 IST
Last Updated 10 ಜುಲೈ 2020, 14:08 IST

ವಿಜಯಪುರ: ಚಿಕಿತ್ಸೆ ಸಿಗದೆ ಪರಾದಡುತ್ತಿದ್ದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸಿಂದಗಿ ತಾಲ್ಲೂಕಿನಿಂದ ರೋಗಿಯೊಂದಿಗೆ ಕಾರಿನಲ್ಲಿ ಶುಕ್ರವಾರ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕುಟುಂಬದವರು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರನ್ನು ಭೇಟಿಯಾದರು.

ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವೈದ್ಯರು ನಿರಾಕರಿಸುತ್ತಿದ್ದಾರೆ. ರಾತ್ರಿಯಿಡೀ ತಿರುಗಾಡಿದೆವು. ಯಾರೊಬ್ಬರೂ ಚಿಕಿತ್ಸೆ ನೀಡಲಿಲ್ಲ ಎಂದು ಕುಟುಂಬದವರು ಅಳಲು ತೋಡಿಕೊಂಡರು.

ADVERTISEMENT

ಜಿಲ್ಲಾಧಿಕಾರಿ ಅವರು ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ಕರೆ ಮಾಡಿ, ರೋಗಿಯನ್ನು ಚಿಕಿತ್ಸೆಗೆ ದಾಖಲಿಸುವಂತೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.