ADVERTISEMENT

‘₹2 ಕೋಟಿ ವೆಚ್ಚದಲ್ಲಿ ಟ್ರೀ ಪಾರ್ಕ್’

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 6:04 IST
Last Updated 14 ಮಾರ್ಚ್ 2024, 6:04 IST
ಸಿಂದಗಿ ಪಟ್ಟಣದ ಹೊನ್ನಪ್ಪಗೌಡ ಬಿರಾದಾರ ಬಡಾವಣೆಯಲ್ಲಿ ಶಾಸಕ ಅಶೋಕ ಮನಗೂಳಿ ಸಮ್ಮುಖದಲ್ಲಿ ಗಣ್ಯರು ಟ್ರೀಪಾರ್ಕ್‌ಗೆ ಭೂಮಿಪೂಜೆ ನೆರವೇರಿಸಿದರು
ಸಿಂದಗಿ ಪಟ್ಟಣದ ಹೊನ್ನಪ್ಪಗೌಡ ಬಿರಾದಾರ ಬಡಾವಣೆಯಲ್ಲಿ ಶಾಸಕ ಅಶೋಕ ಮನಗೂಳಿ ಸಮ್ಮುಖದಲ್ಲಿ ಗಣ್ಯರು ಟ್ರೀಪಾರ್ಕ್‌ಗೆ ಭೂಮಿಪೂಜೆ ನೆರವೇರಿಸಿದರು   

ಸಿಂದಗಿ: ‘ಪಟ್ಟಣದಲ್ಲಿ ₹2 ಕೋಟಿ ವೆಚ್ಚದಲ್ಲಿ ಟ್ರೀ ಪಾರ್ಕ್ ನಿರ್ಮಾಣಗೊಳ್ಳಲಿದೆ. ಅರಣ್ಯ ಸಚಿವರು ಈಗಾಗಲೇ ₹1ಕೋಟಿ ಮಂಜೂರು ಮಾಡಿದ್ದಾರೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಇಲ್ಲಿಯ ಹೊನ್ನಪ್ಪಗೌಡ ಬಿರಾದಾರ ಬಡಾವಣೆಯ 2 ಎಕರೆ 36 ಗುಂಟೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಟ್ರೀಪಾರ್ಕ್ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಪಟ್ಟಣದಲ್ಲಿರುವ ಎಲ್ಲ ಬಡಾವಣೆಗಳಲ್ಲಿ ಹಿರಿಯ ನಾಗರಿಕರು, ಮಕ್ಕಳಿಗಾಗಿ ವಾಯುವಿಹಾರಕ್ಕಾಗಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಕಂದಾಯ ಇಲಾಖೆಗೆ ಸಂಬಂಧಿಸಿದ ಇಲ್ಲಿಯ ಹಳೆಯ ಪೊಲೀಸ್ ಠಾಣೆಯ ಜಾಗವನ್ನು ಪುರಸಭೆಗೆ ವರ್ಗಾಯಿಸಿ ಅಲ್ಲಿ ₹27 ಕೋಟಿ ವೆಚ್ಚದಲ್ಲಿ ಮೆಗಾ ಮಾರ್ಕೆಟ್ ನಿರ್ಮಾಣ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ. ಕಟ್ಟಡದ ಮೇಲಂತಸ್ತಿನ ಕಾಮಗಾರಿಗಾಗಿ ಹೆಚ್ಚುವರಿ ₹5 ಕೋಟಿ ರೂಪಾಯಿ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಹೊಸ ತಾಲ್ಲೂಕು ಆಡಳಿತ ಸೌಧಕ್ಕೆ ಕಚೇರಿಗಳು ಸ್ಥಳಾಂತರಗೊಂಡ ನಂತರ ಹಳೆಯ ತಾಲ್ಲೂಕು ಆಡಳಿತ ಸೌಧ ಕಟ್ಟಡಕ್ಕೆ ಪುರಸಭೆ ಕಾರ್ಯಾಲಯ ವರ್ಗಾಯಿಸಲಾಗುತ್ತದೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ಪ್ರಭು ಸಾರಂಗದೇವ ಶಿವಾಚಾರ್ಯ, ಅರಣ್ಯೀಕರಣಕ್ಕೆ ಆದ್ಯತೆ ನೀಡಬೇಕು ಎಂದರು.

ಪುರಸಭೆ ಆಡಳಿತಾಧಿಕಾರಿ ಅಬೀದ್ ಗದ್ಯಾಳ, ಡಿಎಫ್ಒ ಶಿವಶರಣಯ್ಯ, ಆರ್‌ಎಫ್ಒ ಭಾಗ್ಯವಂತ ಮಸೂತಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ದಯಾನಂದಗೌಡ ಬಿರಾದಾರ, ಡಾ.ಚನ್ನವೀರ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ, ಸತೀಶ ಬಿರಾದಾರ, ಸೋಮು ಕೊಪ್ಪಾ, ಹಾಸಿಂಪೀರ ಆಳಂದ, ಮಂಜುನಾಥ ಬಿಜಾಪೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.