ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ನಿಂದ ವೃದ್ಧರಿಬ್ಬರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.
ಮುದ್ದೇಬಿಹಾಳ ತಾಲ್ಲೂಕಿನ ಮಿಣಜಗಿಯ ನಿವಾಸಿ, 71 ವರ್ಷ ವಯೋಮಾನದ(ಪಿ134577) ವೃದ್ಧರೊಬ್ಬರು ತೀವ್ರ ಉಸಿರಾಟ ತೊಂದರೆ, ಸಕ್ಕರೆ ಕಾಯಿಲೆ, ರಕ್ತದೊತ್ತಡದಿಂದ ಬಳಲಿ ಜುಲೈ 30 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 6 ರಂದು ಮೃತಪಟ್ಟಿದ್ದಾರೆ.
ವಿಜಯಪುರ ನಗರದ ರೈಲ್ವೆ ಸ್ಟೇಷನ್ ಹತ್ತಿರದ ನಿವಾಸಿ, 75 ವರ್ಷ ವಯೋಮಾನದ ವೃದ್ಧ (ಪಿ109936)ರೊಬ್ಬರು ಜ್ವರ, ತೀವ್ರ ಉಸಿರಾಟ ತೊಂದರೆಯಿಂದ ಬಳಲಿ ಜುಲೈ 29 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆಗಸ್ಟ್ 9ರಂದು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.