ADVERTISEMENT

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 8:15 IST
Last Updated 12 ಫೆಬ್ರುವರಿ 2021, 8:15 IST
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು   

ವಿಜಯಪುರ: ಕೊಲ್ಹಾರ ತಾಲ್ಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನಪ್ಪಿದ್ದಾರೆ.

ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ (4) ಹಾಗೂ ಬೋರಮ್ಮ ಸಂಗಣ್ಣ ಬೆನ್ನೂರು (4) ಸಾವನ್ನಪ್ಪಿರುವ ಕಂದಮ್ಮಗಳು.

ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಾ ಹೋಗಿ ಅಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ.

ADVERTISEMENT

ಕೊಲ್ಹಾರ ಪಿಎಸ್ಐ ಸಿದ್ದಪ್ಪ ಯಡಹಳ್ಳಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.