ADVERTISEMENT

ಅನೈತಿಕ ಸಂಬಂಧ: ಜೋಡಿ ಕೊಲೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 5:43 IST
Last Updated 23 ಜುಲೈ 2020, 5:43 IST
   

ವಿಜಯಪುರ: ಅನೈತಿಕ ಸಂಬಂಧದ ಆರೋಪದ ಮೇರೆಗೆ ತಾಲ್ಲೂಕಿನ ಅಲಿಯಾಬಾದ್‌ ಗ್ರಾಮದ ತೋಟದಲ್ಲಿ(ಮೆಟಗಿ ಹತ್ತಿರ) ಮಂಗಳವಾರ ತಡರಾತ್ರಿ ಇಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಅಮರನಾಥ ಸೊಲ್ಲಾಪುರ (24) ಮತ್ತು ಸುನೀತಾ ಸಾಬು ಬೆನಕನಹಳ್ಳಿ ಕೊಲೆಯಾಗಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳಾದ ಮಹಿಳೆಯ ತಂದೆ ರಾಮಗೊಂಡ, ಮಗ ರವಿ ಹಾಗೂ ಅನಿಲ್‌ ಮತ್ತು ಯಲ್ಲಪ್ಪ ತಲೆ ಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದರು. ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.