ADVERTISEMENT

ಮುದ್ದೇಬಿಹಾಳ: ‘ಅನ್ ಟಚೇಬಲಿಟಿ’ಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 5:28 IST
Last Updated 29 ಡಿಸೆಂಬರ್ 2025, 5:28 IST
ಧಾರವಾಡದಲ್ಲಿ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ್ಸ್ ಕೌನ್ಸಿಲ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳದ ಸಾಹಿತಿ ಶಿವಪುತ್ರ ಅಜಮನಿ ಅವರು ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಯನ್ನು ಸ್ವೀಕರಿಸಿದರು
ಧಾರವಾಡದಲ್ಲಿ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ್ಸ್ ಕೌನ್ಸಿಲ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳದ ಸಾಹಿತಿ ಶಿವಪುತ್ರ ಅಜಮನಿ ಅವರು ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಯನ್ನು ಸ್ವೀಕರಿಸಿದರು   

ಮುದ್ದೇಬಿಹಾಳ: ಇಲ್ಲಿನ ದಲಿತ ಸಾಹಿತಿ ಶಿವಪುತ್ರ ಅಜಮನಿ ಅವರ ಅನ್‌ಟಚೇಬಿಲಿಟಿ ಕಿರು ಚಿತ್ರಕ್ಕೆ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ್ಸ್ ಕೌನ್ಸಿಲ್ ವತಿಯಿಂದ ಧಾರವಾಡದಲ್ಲಿ ಭಾನುವಾರ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಿರುಚಿತ್ರ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಲಭಿಸಿದೆ.

ಸಮಾಜದ ಕೆಳಸ್ತರದಲ್ಲಿರುವ ಜಾತಿಯ ಜನರು ಎದುರಿಸುತ್ತಿರುವ ಘಟನೆಗಳನ್ನು ತಮ್ಮ ಅನ್‌ಟಚೇಬಿಲಿಟಿ ಕೃತಿಯಲ್ಲಿ ಬೆಳಕಿಗೆ ತಂದಿದ್ದ ಅಜಮನಿ ಅವರಿಗೆ ಈ ಗೌರವ ಸಂದಿದೆ. ಕಾರ್ಯಕ್ರಮದಲ್ಲಿ ಮಾಲ್ಡಿವ್ಸ್‌ನ ನಿರ್ಮಾಪಕ ಮಹಮ್ಮದ್ ರಷೀದ್, ಕನ್ನಡ ನಟ ಮುನಿಕೃಷ್ಣ ಮುರುಗನ್, ಮಾಜಿ ಮೇಯರ್ ವಿರೇಶ ಅಂಚಟಗೇರಿ, ಸಂಯೋಜಕ ರಾಹುಲದತ್ತ ಪ್ರಸಾದ ಇದ್ದರು. ಅಜಮನಿ ಅವರನ್ನು ಮುದ್ದೇಬಿಹಾಳದ ಕ್ರಿಯೇಟಿವ್ ಪ್ರೆಂಡ್ಸ್ ಕ್ಲಬ್‌ನ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT