ADVERTISEMENT

ಕಿತ್ತೂರ ಚನ್ನಮ್ಮ ನಾಟ್ಯ ಮಂದಿರ ಪ್ರಾರಂಭಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 16:05 IST
Last Updated 14 ಸೆಪ್ಟೆಂಬರ್ 2022, 16:05 IST
ವಿಜಯಪುರ ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶಸಿಸಲು ಅನುಕೂಲವಾಗುವಂತೆ ಕಿತ್ತೂರ ಚನ್ನಮ್ಮ ನಾಟ್ಯ ಮಂದಿರ ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು
ವಿಜಯಪುರ ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶಸಿಸಲು ಅನುಕೂಲವಾಗುವಂತೆ ಕಿತ್ತೂರ ಚನ್ನಮ್ಮ ನಾಟ್ಯ ಮಂದಿರ ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು   

ವಿಜಯಪುರ:ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶಸಿಸಲು ಅನುಕೂಲವಾಗುವಂತೆ ಕಿತ್ತೂರ ಚನ್ನಮ್ಮ ನಾಟ್ಯ ಮಂದಿರ ಪ್ರಾರಂಭಿಸುವಂತೆ ಹಾಗೂಹಂದಿಗನೂರ ಸಿದ್ರಾಮಪ್ಪ ಬಯಲು ರಂಗಮಂದಿರಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಬಹು ವರ್ಷಗಳಿಂದ ನಾಟಕ ಪ್ರದರ್ಶನ ಇಲ್ಲದೆ ಇರುವುದರಿಂದ ಕಲಾಭಿಮಾನಿಗಳು ಹಾಗೂ ಕಲಾವಿದರು ನಿರಾಶೆಗೊಂಡಿದ್ದಾರೆ ಎಂದರು.

ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಎಲ್.ಬಿ. ಶೇಖ್‌ ಮಾಸ್ತರ ಮಾತನಾಡಿ, ಬಹು ವರ್ಷಗಳಿಂದ ನಾಟಕ ಪ್ರದರ್ಶನ ಇಲ್ಲದೆ ಇರುವುದರಿಂದ ಜಿಲ್ಲೆಯಲ್ಲಿ ಸಾಂಸ್ಕೃತಿಕ ಬದುಕು ಬರಡಾಗಿದೆ. ತಕ್ಷಣವೇ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕು ಎಂದರು.

ADVERTISEMENT

ನಾಟಕ ಅಕಾಡೆಮಿ ಸದಸ್ಯ ಶ್ರೀಧರ ಹೆಗಡೆ ಹಾಗು ಚಿಂದೋಡಿ ಕಂಪನಿ ಮಾಲೀಕರಾದ ಕೋಟ್ರೇಶ ಮಾತನಾಡಿ, ನಗರದ ಹೃದಯ ಭಾಗದಲ್ಲಿರುವ ಕಿತ್ತೂರ ಚನ್ನಮ್ಮ ನಾಟ್ಯ ಮಂದಿರ ಭೂಗಳ್ಳರು ಕಬಿಳಸಲು ಹೊಂಚು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಹಾಗೇನಾದರೂ ಆದರೆ ಕಿತ್ತೂರ ಚನ್ನಮ್ಮ ನಾಟ್ಯ ಮಂದಿರದಲ್ಲಯೆ ಚಳವಳಿ ಮಾಡಲಾಗುವುದು. ಅದಕ್ಕೆ ಆಗಿರುವ ನಿಜವಾದ ಕಾರಣವಾದರೂ ಏನು ಎಂಬ ಪ್ರಶ್ನೆ ಮೂಡುತ್ತದೆ ಎಂದರು.

ಸಿದ್ದು ಹಂಪನಗೌಡ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಮಂಜುನಾಥ್ ಜಾಲಿಹಾಳ, ರಾಜಣ್ಣ ಜೇವರಗಿ, ಪ್ರೇಮಾ ಪಾಟೀಲ್, ಅಯ್ಯಣ್ಣಸ್ವಾಮಿ ಹಿರೇಮಠ, ಪ್ರವೀಣ್ ಬಾಗಲಕೋಟೆ, ರೇವಣಸಿದ್ದೇಶ್ವರ ಹೊಸರಮಠ, ಶಂಕ್ರಪ್ಪ ಅರಳಿಹಳ್ಳಿ, ಮಹಾಂತೇಶ ಚಿಕ್ಕಮಠ, ಬಸವರಾಜ ಬೆಂಗೇರಿ, ಅಸ್ಪಾಕಹುಸೇನ, ಜಹಾಗೀರದಾರ, ಮಂಟೇಶ ದಂಡಿನ, ಬಿ ಕುಮಾರಸ್ವಾಮಿ, ಕತಾಲಸಾಬ ತೆಗ್ಗಿಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.