ಸಿಂದಗಿ (ವಿಜಯಪುರ): ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರು ಇದನ್ನು ಬಹಿಷ್ಕರಿಸಬೇಕು’ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಹೇಳಿದರು.
‘ಹೈಕೋರ್ಟ್ ಆದೇಶದಂತೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದು ಜನರ ಆಯ್ಕೆ ಆಗಿದೆ. ಈ ಮೂಲಕ ಜನರ ಖಾಸಗಿತನ, ವ್ಯಕ್ತಿ ಸ್ವಾತಂತ್ರ್ಯವನ್ನು ಕೋರ್ಟ್ ಎತ್ತಿ ಹಿಡಿದಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ಸಮೀಕ್ಷೆಯನ್ನು ಸಾರಸಗಟಾಗಿ ಬಹಿಷ್ಕರಿಸಲು ಪಂಚಪೀಠಾಧೀಶ್ವರರು ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಎಲ್ಲರೂ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.