ADVERTISEMENT

ವಿಜಯ ಸಂಕಲ್ಪ ಯಾತ್ರೆ ಮಾ.10ಕ್ಕೆ: ಯತ್ನಾಳ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 13:08 IST
Last Updated 6 ಮಾರ್ಚ್ 2023, 13:08 IST
ವಿಜಯಪುರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ  ಶಾಸಕ ಬಸನಗೌಡ  ಪಾಟೀಲ ಯತ್ನಾಳ ಮಾತನಾಡಿದರು
ವಿಜಯಪುರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ  ಶಾಸಕ ಬಸನಗೌಡ  ಪಾಟೀಲ ಯತ್ನಾಳ ಮಾತನಾಡಿದರು   

ವಿಜಯಪುರ: ಮಾ.10 ರಂದು ವಿಜಯಪುರ ನಗರದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ ಇಡೀ ರಾಜ್ಯಕ್ಕೆ ಮಾದರಿ ಆಗುವಂತೆ ಆಯೋಜಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ನಡೆದ ಪ್ರಗತಿ ರಥಯಾತ್ರೆ ಆಗಮನ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಗರದ ಇತಿಹಾಸದಲ್ಲೇ ಆಗದ ಅಭಿವೃದ್ಧಿ ಕಾರ್ಯಗಳು ಕಳೆದ ಐದು ವರ್ಷಗಳಲ್ಲಿ ಆಗಿದೆ. 20 ವರ್ಷಗಳಾದರೂ ನಮ್ಮ ರಸ್ತೆಗಳು ಹಾಳಾಗುವುದಿಲ್ಲ. ಅಷ್ಟೊಂದು ಗುಣಮಟ್ಟದ ಕಾಮಗಾರಿಗಳು ಆಗಿವೆ. ಬೇರೆಯವರಂತೆ ಪರ್ಸೆಂಟೆಜ್ ಪಡೆದಿಲ್ಲ ಎಂದು ಹೇಳಿದರು.

ADVERTISEMENT

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಬಿಜೆಪಿಗೆ ಹೊಸ ಹುಮ್ಮಸ್ಸು ತಂದಿದೆ. ರಾಜ್ಯ, ರಾಷ್ಟ್ರ ನಾಯಕರು ಕರೆ ಮಾಡಿ ಶ್ಲಾಘಿಸಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಅದಕ್ಕಾಗಿಯೇ ದೇಶದಾದ್ಯಂತ ಬಿಜೆಪಿಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದು ಹೇಳಿದರು.

ಇಡೀ ಜಗತ್ತಿಗೆ ಭಯಾನಕ ಹುಟ್ಟಿಸಿದ್ದ ಕೊರೊನಾ ನಿರ್ವಹಣೆಯಲ್ಲಿ ಭಾರತ ಮಾದರಿ ಆಗಿದೆ. ಮುಂದುವರೆದ ಹಾಗೂ ಅತೀ ಕಡಿಮೆ ಜನಸಂಖ್ಯೆ ಹೊಂದಿರುವ ದೇಶ ಮಾಡಲಾಗದೆ, ಕೋವಿಡ್ ಲಸಿಕೆಯಲ್ಲಿ ಭಾರತ ನಂಬರ್ 1 ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು.

ಪ್ರತಿ ಕುಟುಂಬ ಸ್ವಾವಲಂಬಿಯಾಗಿ ಬದುಕು ಸಾಗಿಸುವಂತೆ ಮಾಡುವುದೇ ನಿಜವಾದ ಅಭಿವೃದ್ಧಿ. ಆ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರೀತಿಯಿಂದಲೂ ಶ್ರಮಿಸುತ್ತಿದೆ. ಸುರಕ್ಷತೆ ದೃಷ್ಟಿಯಿಂದಲೂ ದಿಟ್ಟತನದಿಂದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಅದಕ್ಕಾಗಿಯೇ ದೇಶದಲ್ಲಿ ಬಾಂಬ ಸ್ಪೋಟ್ ಮತ್ತಿತರೆ ಅಹಿತಕರ ಘಟನೆಗಳಿಗೆ ವಿರಾಮ ಕೊಡಲಾಗಿದೆ. ಅದೇ ವ್ಯವಸ್ಥೆ ವಿಜಯಪುರ ನಗರದಲ್ಲೂ ಇಡಲಾಗಿದೆ. ಯಾರು ಕೂಡ ತುಟಿ ಪಿಟಕ್ ಅನ್ನಂಗಿಲ್ಲ ಎಂದು ಹೇಳಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಳುಗೌಡ ಪಾಟೀಲ, ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ನಗರ ಮಂಡಳ ಪ್ರಧಾನ ಕಾರ್ಯದರ್ಶಿ ಭರತ ಕೋಳಿ, ಪಾಪುಸಿಂಗ್ ರಜಪೂತ, ಮಹಿಳಾ ಘಟಕದ ಅಧ್ಯಕ್ಷೆ ಛಾಯಾ ಮಸಿಯವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.