ADVERTISEMENT

ವಿಜಯಪುರ: ಆಹಾರ ಕಿಟ್‌ ದುರುಪಯೋಗದ ವಿರುದ್ಧ ಕ್ರಮದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 2 ಮೇ 2020, 13:34 IST
Last Updated 2 ಮೇ 2020, 13:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಕಂಟೈನ್‌ಮೆಂಟ್‌ ಪ್ರದೇಶದಲ್ಲಿ ದಾನಿಗಳಿಂದ ಸಂಗ್ರಹಿಸಿ ಬಡವರಿಗೆ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ಕಿಟ್‌ಗಳನ್ನು ಕೆಲವರು ದುರುಪಯೋಗ ಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಫರ್‌ ಜೋನ್‌ಗೆ ವಿನಾಯ್ತಿ: ಕೋವಿಡ್‌ ದೃಢಪಟ್ಟಿರುವ ವಿಜಯಪುರದ ಕಂಟೈನ್‌ಮೆಂಟ್‌ ಜೋನ್‌ಗೆ ಹೊಂದಿಕೊಂಡಿರುವ ಬಫರ್‌ ಜೋನ್‌ಗೆ ವಿನಾಯ್ತಿ ನೀಡಲಾಗಿದ್ದು, ಇದರಿಂದ 3 ಸಾವಿರ ಕುಟುಂಬಗಳು ಬಫರ್‌ ಜೋನ್‌ನಿಂದ ಹೊರಬರಲಿವೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.