ADVERTISEMENT

‘ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಿಸಿ’

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 13:31 IST
Last Updated 9 ಏಪ್ರಿಲ್ 2020, 13:31 IST

ವಿಜಯಪುರ: ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಯಾವುದೇ ಸಭೆ ಸಮಾರಂಭ ಏರ್ಪಡಿಸಲು ನಿಷೇಧ ಇರುವುದರಿಂದ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನವನ್ನು ಸರ್ಕಾರಿ ಕಚೇರಿಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲು ಸರ್ಕಾರ ಸೂಚಿಸಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸ್ತಿತೆರಿಗೆ ಪಾವತಿ ಅವಧಿ ವಿಸ್ತರಣೆ
ವಿಜಯಪುರ:
ಕೋವಿಡ್-19 ಹಿನ್ನೆಲೆಯಲ್ಲಿ ಏಪ್ರಿಲ್‌ 14ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದ್ದು, ಕರದಾತರಿಗೆ ಆಸ್ತಿ ತೆರಿಗೆ ಪಾವತಿಸಲು ತೊಂದರೆಯಾಗುವುದರಿಂದ ಆಸ್ತಿ ತೆರಿಗೆ ಮೇಲೆ ಶೇ5 ರಷ್ಟು ರಿಯಾಯಿತಿಯೊಂದಿಗೆ ಪಾವತಿ ಕಾಲಮಿತಿಯನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಪೇಟಿಎಂ ಮೂಲಕ ಅಥವಾ ಮಹಾನಗರ ಪಾಲಿಕೆಯ ಜಾಲತಾಣ www.vijayapuracitycorp.org ಮೂಲಕವೂ ಪಾವತಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.