ಸಾವು
(ಪ್ರಾತಿನಿಧಿಕ ಚಿತ್ರ)
ವಿಜಯಪುರ: ತಾಲ್ಲೂಕಿನ ಮಿಂಚನಾಳ ತಾಂಡಾದ ಮಾದೇವ ನಗರದಲ್ಲಿ ಗುರುವಾರ ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದಾರೆ.
‘ಶಿವಮ್ಮ ರಾಜು ರಾಠೋಡ (8), ಸ್ವಪ್ನಾ ರಾಜು ರಾಠೋಡ (12) ಮತ್ತು ಕಾರ್ತಿಕ ವಿಶ್ವ ರಾಠೋಡ ಮೃತರು. ಕುರಿಗಳ ಜೊತೆಗೆ ಆಟವಾಡುತ್ತಿದ್ದ ವೇಳೆ ಮಕ್ಕಳು ಕಾಲು ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಸಾವಿಗೀಡಾಗಿದ್ದಾರೆ’ ಎಂದು ಕುಟುಂಬದವರು ತಿಳಿಸಿದ್ದಾರೆ.
ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಚೆನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.