ADVERTISEMENT

ವಿಜಯಪುರ: ಗಾಂಜಾ ಬೆಳೆದಿದ್ದ ತಂದೆ, ಮಗನ ಬಂಧನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 12:56 IST
Last Updated 12 ಸೆಪ್ಟೆಂಬರ್ 2020, 12:56 IST
ನಿಂಬೆ ಮತ್ತು ಬಾಳೆ ತೋಟದಲ್ಲಿ ರೈತರು ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಿಂಬೆ ಮತ್ತು ಬಾಳೆ ತೋಟದಲ್ಲಿ ರೈತರು ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.   

ವಿಜಯಪುರ: ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ನಿಂಬೆ ಮತ್ತು ಬಾಳೆ ತೋಟದಲ್ಲಿ ರೈತರು ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬಳಗಾನೂರ ಗ್ರಾಮದ ಅರವಿಂದ ಮದರಿ(54) ಮತ್ತು ಅವರ ಮಗ ಪ್ರವೀಣ ಮದರಿ(25) ಬಂಧಿತ ಆರೋಪಿಗಳು. ಇವರು ತಮ್ಮ ಹೊಲದಲ್ಲಿ ಬೆಳೆದಿದ್ದ ಸುಮಾರು 46 ಕೆ.ಜಿ. ಹಸಿ ಗಾಂಜಾ ಮತ್ತು ಮೂರು ಕೆ.ಜಿ.ಒಣ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸ್‌ ಇನ್‌ಸ್ಪೆಕ್ಟರ್‌ ಸುನೀಲ ಕಾಂಬಳೆ ನೇತೃತ್ವದ ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.