ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಹಾಲು ಒಕ್ಕೂಟ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಗರದ 65 ಕೊಳೆಗೇರಿಗಳ ವ್ಯಾಪ್ತಿಯ 18 ಸಾವಿರ ಮನೆಗಳಿಗೆ ಶುಕ್ರವಾರ ಬೆಳಿಗ್ಗೆ ತಲಾ ಒಂದು ಲೀಟರ್ ನಂದಿನಿ ಹಾಲನ್ನು ವಿತರಿಸಲಾಯಿತು.
ಕೊಳೆಗೇರಿಗಳ ಮನೆ, ಮನೆಗೆ ಮಹಾನಗರ ಪಾಲಿಕೆ ಸಿಬ್ಬಂದಿ ತೆರಳಿ, ಮನೆ ಮಾಲೀಕರ ಹೆಸರನ್ನು ಬರೆದುಕೊಂಡು ಹಾಲಿನ ಪ್ಯಾಕೆಟ್ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ ನೇತೃತ್ವದಲ್ಲಿ ನಗರದಲ್ಲಿ ಹಾಲು ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.