ADVERTISEMENT

ವಿಜಯಪುರ: ಶಾಸಕ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 7:51 IST
Last Updated 21 ನವೆಂಬರ್ 2020, 7:51 IST
ಯತ್ನಾಳ್‌ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಯತ್ನಾಳ್‌ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ವಿಜಯಪುರ: ಕನ್ನಡ ಪರ ಸಂಘಟನೆಗಳನ್ನು ರೋಲ್ ಕಾಲ್ ಸಂಘಟನೆಗಳು ಎಂದು ಟೀಕಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯತ್ನಾಳ ಕಚೇರಿ ಎದುರು ಅವರ ಪ್ರತಿಕೃತಿ ದಹಿಸಿ, ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮರಾಠಾ ಸಮುದಾಯವನ್ನು ಓಲೈಸುವ ಉದ್ದೇಶದಿಂದ ಪ್ರಾಧಿಕಾರ ರಚಿಸಿರುವ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ ಎಂದರು.

ADVERTISEMENT

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಮುಲ್ಲಾ, ಮಹಾದೇವ ರಾವ್ ಜಿ, ಪ್ರಕಾಶ ಕುಂಬಾರ, ಫಯಾಜ್ ಕಲಾದಗಿ, ಅಶೋಕ ಹರಿವಾಳ, ಶ್ರೀಕಾಂತ ಬಿಜಾಪುರ, ಶಿವಾನಂದ ದುದಗಿ, ಬಸವರಾಜ ಬಿ.ಕೆ. , ದಸ್ತಗೀರ ಸಾಲೊಟಗಿ ಇದ್ದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.