ADVERTISEMENT

ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ

​ಪ್ರಜಾವಾಣಿ ವಾರ್ತೆ
Published 10 ಮೇ 2020, 3:00 IST
Last Updated 10 ಮೇ 2020, 3:00 IST
   

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಧಾರಾಕಾರವಾಗಿ ಮಳೆ ಸುರಿಯಿಲಾರಂಭಿಸಿದೆ.

ಬೆಳಿಗ್ಗೆ 4ರಿಂದ ಆರಂಭಗೊಂಡ ಮಳೆ ಬಿಟ್ಟು ಬಿಟ್ಟು ಸುರಿಯುತ್ತಲೇ ಇದೆ.

ದಿನಪತ್ರಿಕೆ, ಹಾಲು ವಿತರಣೆಗೂ ಮಳೆ ಅಡ್ಡಿಯಾಯಿತು.

ADVERTISEMENT

ಬೇಸಿಗೆ ಬಿಸಿಲಿನಿಂದ ತತ್ತರಿಸಿದ್ದ ಜನ ಭಾನುವಾರದ ಮಳೆಯಿಂದ ನಿರಾಳರಾದರು. ಕಾವೇರಿದ ಇಳೆ ತಂಪಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.