ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಕಿಡಗೇಡಿಗಳು ಅಂಟಿಸಿದ್ದಾರೆ.
ಇಲ್ಲಿನ ಜಲನಗರದಲ್ಲಿರುವ ಕಾಂಗ್ರೆಸ್ ಕಚೇರಿಯ ಬಾಗಿಲು, ಕಿಟಕಿ, ಗೋಡೆ ಮೇಲೆ ಸಾವರ್ಕರ್ ಭಾವಚಿತ್ರ ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಭಾವಚಿತ್ರ ಅಂಟಿಸಿರುವ ವಿಷಯ ಬೆಳಿಗ್ಗೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಭಾವಚಿತ್ರಗಳನ್ನು ತೆರವುಗೊಳಿಸಿದರು.
ಕಾಂಗ್ರೆಸ್ ಕಚೇರಿ ಸಮೀಪದಲ್ಲೇ ಬಿಜೆಪಿ ಜಿಲ್ಲಾ ಕಚೇರಿಯೂ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.