ADVERTISEMENT

ಶೂಟೌಟ್‌ ಪ್ರಕರಣ: ಮತ್ತೆ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 13:37 IST
Last Updated 11 ನವೆಂಬರ್ 2020, 13:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಕಾಂಗ್ರೆಸ್‌ ಮುಖಂಡ ಮಹಾದೇವ ಸಾಹುಕಾರ ಬೈರಗೊಂಡ ಅವರು ಚಲಿಸುತ್ತಿದ್ದ ಕಾರಿಗೆ ನ. 2ರಂದು ಕನ್ನಾಳ ಕ್ರಾಸ್‌ ಬಳಿ ಟಿಪ್ಪರ್‌ನಿಂದ ಡಿಕ್ಕಿ ಹೊಡೆಸಿ, ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಜನರನ್ನು ಬಂಧಿಸಿದ್ದ ತನಿಖಾ ತಂಡವು, ಆರೋಪಿಗಳಾದ ವಿಜಯಪುರ ನಗರದ ಇಂಡಿ ರೋಡ್‌ನ ಬಂಬಳ ಅಗಸಿ ನಿವಾಸಿಗಳಾದ ಹಸನ್‌ ಡೋಂಗ್ರಿ ಉರುಫ್‌ ಡೋಂಗ್ರಿಸಾಬ ಬಡೇಗರ(24), ಕಲ್ಲಪ್ಪ ಉರುಫ್‌ ಮುದಕಪ್ಪ ಬಜಂತ್ರಿ(24) ಮತ್ತು ಈರಣ್ಣ ಬಜಂತ್ರಿ(21) ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೂರು ಮೊಬೈಲ್‍ಗಳನ್ನು ವಶಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.