ADVERTISEMENT

ವಿಜಯಪುರ | ಚಾಕು ಇರಿತ: ಒಬ್ಬ ಸಾವು

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 15:57 IST
Last Updated 22 ಆಗಸ್ಟ್ 2022, 15:57 IST
ಸುನೀಲ ರಜಪೂತ
ಸುನೀಲ ರಜಪೂತ   

ವಿಜಯಪುರ: ನಗರದ ಮನಗೂಳಿ ಬೈಪಾಸ್‌ ಬಳಿ ಎರಡು ದಿನಗಳ ಹಿಂದೆ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಾವಿಗೀಡಾಗಿದ್ದಾನೆ.

ಯೋಗಾಪುರ ಕಾಲೊನಿ ನಿವಾಸಿ ಸುನೀಲ ರಜಪೂತ (23)ಚಾಕು ಇರಿತದಿಂದ ಸಾವಿಗೀಡಾದ ಯುವಕ ಎಂದು ಗುರುತಿಸಲಾಗಿದೆ. ಚಾಕು ಇರಿತಕ್ಕೆ ಒಳಗಾಗಿರುವ ಮತ್ತೊಬ್ಬ ರಮೇಶ ಮಾದರ(28)ಗೆ ಚಿಕಿತ್ಸೆ ಮುಂದುವರೆದಿದೆ.

ಎರಡು ದಿನಗಳ ಹಿಂದೆ ಮನಗೂಳಿ ಬೈಪಾಸ್ ಬಳಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇದುವರೆಗೂ ಪತ್ತೆಯಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.