ADVERTISEMENT

ವಿಜಯಪುರ, ತಾಳಿಕೋಟೆ: ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 14:01 IST
Last Updated 12 ಆಗಸ್ಟ್ 2021, 14:01 IST
ವಿಜಯಪುರ ನಗರದ ಎಂ.ಜಿ.ರಸ್ತೆಯಲ್ಲಿ ಗುರುವಾರ ಸಂಜೆ ಬಿರುಸಾಗಿ ಸುರಿದ ಮಳೆಯ ನಡುವೆ ಸಾಗಿದ ವಾಹನಗಳು–ಪ್ರಜಾವಾಣಿ ಚಿತ್ರ
ವಿಜಯಪುರ ನಗರದ ಎಂ.ಜಿ.ರಸ್ತೆಯಲ್ಲಿ ಗುರುವಾರ ಸಂಜೆ ಬಿರುಸಾಗಿ ಸುರಿದ ಮಳೆಯ ನಡುವೆ ಸಾಗಿದ ವಾಹನಗಳು–ಪ್ರಜಾವಾಣಿ ಚಿತ್ರ   

ವಿಜಯಪುರ: ಎರಡು ವಾರಗಳಿಂದ ಮರೆಯಾಗಿದ್ದ ಮಳೆ ಗುರುವಾರ ಸಂಜೆ ಸುಮಾರು ಅರ್ಧ ತಾಸು ವಿಜಯಪುರ ನಗರ ಸೇರಿದಂತೆ ತಾಳಿಕೋಟೆ ಪಟ್ಟಣದಲ್ಲಿ ಧಾರಾಕಾರವಾಗಿ ಸುರಿಯಿತು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಬಾಡತೊಡಗಿತ್ತು. ಇದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಿಸಿಲಿನ ತಾಪ ಬೇಸಿಗೆಯನ್ನು ನೆನಪಿಸುವಂತಿತ್ತು. ಇದೀಗ ಮಳೆಯಾಗಿರುವುದರಿಂದ ರೈತರ ಆತಂಕ ದೂರವಾಗಿದೆ. ವಾತಾವರಣವೂ ತಂಪಾಗಿದೆ.

ಸುಮಾರು ಅರ್ಧ ತಾಸು ಮಳೆಯಾದ ಪರಿಣಾಮ ಚರಂಡಿಗಳು ಉಕ್ಕಿ ಮಳೆ ನೀರು ರಸ್ತೆ ಮೇಲೆ ಹರಿಯಿತು. ತಗ್ಗು ಪ್ರದೇಶ, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.

ADVERTISEMENT

ತಿಕೋಟಾ, ನಾಲತವಾಡ ವ್ಯಾಪ್ತಿಯಲ್ಲೂ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.