ADVERTISEMENT

ವಿಜಯಪುರ: ಪರೀಕ್ಷೆಯಲ್ಲಿ ನಕಲು ಚೀಟಿ ಕೊಡಲು ಹೋಗಿದ್ದ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 10:28 IST
Last Updated 27 ಜೂನ್ 2020, 10:28 IST
ಸಾವಿಗೀಡಾದ ಯುವಕ
ಸಾವಿಗೀಡಾದ ಯುವಕ   

ವಿಜಯಪುರ: ಜಿಲ್ಲೆಯ ಹೂವಿನಹಿಪ್ಪರಗಿ ಗ್ರಾಮದ ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ಚೀಟಿ ಕೊಡಲು ಹೋಗಿದ್ದ ಕಾನಾಳ ಗ್ರಾಮದ ಸಾಗರ ಚಲವಾದಿ (19) ಎಂಬ ಯುವಕ ಸಾವಿಗೀಡಾಗಿದ್ದಾನೆ.

ನಕಲು ಕೊಡಲು ಹೋಗಿದ್ದಾಗ ಪೊಲೀಸರ ಲಾಟಿ ಏಟಿಗೆ ತಮ್ಮ‌ ಮಗ ಮೃತಪಟ್ಡಿದ್ದಾಗಿ ಮೃತನ ಕುಟುಂಬದ ಸದಸ್ಯರು ಆರೋಪಿಸುತ್ತಿದ್ದಾರೆ. ಆದರೆ, ಪೊಲೀಸರು ಮಾತ್ರ ಹೃದಯ ಸಂಬಂಧಿ ಕಾಯಿಲೆ ಇದ್ದ ಯುವಕ ತಮ್ಮನ್ನು ನೋಡಿ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ಹೇಳುತ್ತಿದ್ದಾರೆ.

ಹೀಗಾಗಿ ಯುವಕನ ‌ಸಾವು ಅನುಮಾನ ಮೂಡಿಸಿದೆ. ಬಸವನಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.