ವಿಜಯಪುರ: ‘ಕ್ರೀಡಾಕೂಟಗಳಲ್ಲಿ ಸೋಲು–ಗೆಲುವು ಮುಖ್ಯವಲ್ಲ. ಆದರೆ, ಸ್ಪರ್ಧಿಸುವುದು ಮತ್ತು ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವುದು ಬಹಳ ಮುಖ್ಯ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಹೇಳಿದರು.
ಇಲ್ಲಿಯ ಸೈನಿಕ ಶಾಲೆಯ ಮೈದಾನದಲ್ಲಿ ಸೋಮವಾರ ಆರಂಭವಾದ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ವಲಯ ವಾಲಿಬಾಲ್ ಚಾಂಪಿಯನ್ಶಿಪ್ಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಪ್ರತಿಯೊಂದು ತಂಡದವರು ಹೋರಾಟ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡಾ ಸ್ಫೂರ್ತಿಯನ್ನು ಮೆರೆಯಬೇಕು’ ಎಂದು ತಿಳಿಸಿದರು.
ವಿವಿಧ ರಾಜ್ಯಗಳಿಂದ ಬಂದಿದ್ದ ತಂಡಗಳು ಆಕರ್ಷಕ ಪಥಸಂಚಲನ ನಡೆಸಿ ಗಮನ ಸೆಳೆದವು. ಸಮಾರೋಪ ಸಮಾರಂಭವು ಆ.23ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಶಾಲೆಯ ಪ್ರಾಂಶುಪಾಲ ಕ್ಯಾಪ್ಟನ್ ವಿನಯ್ ತಿವಾರಿ ಸ್ಮರಣಿಕೆ ನೀಡಿ ಗೌರವಿಸಿದರು. ಉಪ ಪ್ರಾಂಶುಪಾಲ ಲೆಫ್ಟಿನೆಂಟ್ ಕಮಾಂಡರ್ ರವಿಕಾಂತ್ ಶುಕ್ಲಾ, ಆಡಳಿತಾಧಿಕಾರಿ, ವಿಕ್ರಮ್ ಸಿಂಗ್, ಹಿರಿಯಶಿಕ್ಷಕ ಜಿ. ಶ್ರೀರಾಮಮೂರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.