ವಿಜಯಪುರ: ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ಭಾರತಿ ಹಣಮಂತ ಕೆಂಗನಾಳ(40) ಸಾವಿಗೀಡಾಗಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಎಮ್ಮೆಗೆ ಸಿಡಿಲು ಬಡಿದು ಸಾವು:
ಶಿರಾಡೋಣ ಗ್ರಾಮದ ಮಹಾದೇವ ರಕಮಾಜಿ ಪಾಂಡ್ರೆ ಅವರ ಜಮೀನಿನಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾಗಿದೆ.
ಧಾರಾಕಾರ ಮಳೆ:
ವಿಜಯಪುರ ನಗರ, ಸಿಂದಗಿ ಪಟ್ಟಣದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.