ADVERTISEMENT

ಎಎಪಿ ಗೆಲುವಿಗೆ ಶ್ರಮಿಸಿ: ಬಿರಾದಾರ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 13:57 IST
Last Updated 31 ಜನವರಿ 2023, 13:57 IST
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ವಿಜಯಪುರ ಆಮ್‌ ಆದ್ಮಿ ಪಾರ್ಟಿ ಚುನಾವಣೆ ಸಿದ್ಧತಾ ಸಭೆಯಲ್ಲಿ ಮುಖಂಡ ಡಾ.ಬಿ.ಎಂ.ಬಿರಾದಾರ ಮಾತನಾಡಿದರು
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ವಿಜಯಪುರ ಆಮ್‌ ಆದ್ಮಿ ಪಾರ್ಟಿ ಚುನಾವಣೆ ಸಿದ್ಧತಾ ಸಭೆಯಲ್ಲಿ ಮುಖಂಡ ಡಾ.ಬಿ.ಎಂ.ಬಿರಾದಾರ ಮಾತನಾಡಿದರು   

ವಿಜಯಪುರ: ಆಮ್‌ ಆದ್ಮಿ ಪಾರ್ಟಿಯಿಂದ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸಿದ್ಧತೆ ನಡೆಯಿತು.

ಆಮ್ ಆದ್ಮಿ ಪಕ್ಷದ ವಿಜಯಪುರ ನಗರ ಕ್ಷೇತ್ರದ ಆಕಾಂಕ್ಷಿ ಡಾ.ಬಿ.ಎಂ.ಬಿರಾದಾರ ಮಾತನಾಡಿ, ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷದ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆ ಜೊತೆಗೆ ಜನರನ್ನು ಪಕ್ಷದತ್ತ ಸೆಳೆಯಲು ಆದ್ಯತೆ ನೀಡಬೇಕು ಎಂದರು.

ದೆಹಲಿ, ‍ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳು ಹಾಗೂ ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ನಮ್ಮ ಮತದಾರರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.

ADVERTISEMENT

ಜನಜಾಗೃತಿಗಾಗಿ ರೋಡ್‌ ಶೋ, ಬೀದಿ ಸಭೆ, ಬಹಿರಂಗ ಸಮಾವೇಶ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಅವರು ಸೂಚಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೋಗೇಶ್ ಸೋಲಾಪುರ, ಎಲ್ಲ ಪಕ್ಷಗಳು ನಮ್ಮ ರಾಜ್ಯದ ಯುವಕರನ್ನು ದಾರಿ ತಪ್ಪಿಸುತ್ತಿವೆ. ಇಂದು ಯುವಕರು ಜಾಗರುಕರಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಮಲ್ಲಿಕಾರ್ಜುನ ಕೆಂಗನಾಳ, ಎಸ್‌.ಆರ್‌.ಸಂಸ್ಥಾನಿಕ್‌, ನಿಹಾದ್‌ ಗೂಡಿಹಾಳ, ಎಸ್‌.ಬಿ. ಗೊಬ್ಬೂರು, ಸಂಜಯ ಸಾಲಿ, ಬಂದೇನವಾಜ್‌ ರೂಗಿ, ಮಾನೆ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.