ADVERTISEMENT

ವಿಜಯಪುರ: ಅಲೆಮಾರಿ ಕುರಿಗಾಹಿಗಳೊಂದಿಗೆ ಸಂವಾದ, ವಾಸ್ತವ್ಯ ಇಂದು

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತ ವಿನೂತನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 15:35 IST
Last Updated 3 ಸೆಪ್ಟೆಂಬರ್ 2020, 15:35 IST
ಸುಜಾತಾ ಕಳ್ಳಿಮನಿ
ಸುಜಾತಾ ಕಳ್ಳಿಮನಿ   

ವಿಜಯಪುರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರು ವಿನೂತನ ಕಾರ್ಯಕ್ರಮ ನಡೆಸಲು ಸಜ್ಜಾಗಿದ್ದಾರೆ.

ಸೆಪ್ಟೆಂಬರ್‌ 4ರಂದುಸಂಜೆ 6ಕ್ಕೆತಿಕೋಟಾ ತಾಲ್ಲೂಕಿನ ಲೋಗಾಂವ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಅಡವಿಯಲ್ಲಿ ಅಲೆಮಾರಿ ಕುರಿಗಾಯಿಗೊಂದಿಗೆ ಸಂವಾದ ಮತ್ತು ವಾಸ್ತವ್ಯ ಮಾಡಲಿದ್ದಾರೆ.

ಅಧ್ಯಕ್ಷರೊಂದಿಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಮತ್ತು ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್‌ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ADVERTISEMENT

ಕುರಿಗಾಹಿಗಳ ಸಮಸ್ಯೆಗಳನ್ನು ಆಲಿಸಲಿರುವ ಅಧ್ಯಕ್ಷರು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ಅಸಂಘಟಿತ ವಲಯಕ್ಕೆ ಸೇರಿರುವಅಲೆಮಾರಿ ಕುರಿಗಾಹಿಗಳು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಶಿಕ್ಷಣ, ನಗರದಿಂದ ವಂಚಿತರಾಗಿದ್ದಾರೆ. ಹೀಗಾಗಿ ಅವರ ದೂರು, ದುಮ್ಮಾನಗಳನ್ನು ಆಲಿಸುವ ಉದ್ದೇಶದಿಂದ ಸಂವಾದ, ವಾಸ್ತವ್ಯ ಮಾಡಲಿದ್ದೇನೆ’ ಎಂದು ತಿಳಿಸಿದರು.

‘ಕುರಿಗಾಹಿಗಳೊಂದಿಗೆ ಟೆಂಟ್‌ನಲ್ಲೇ ವಾಸ್ತವ್ಯ ಮಾಡಿದ ಬಳಿಕ ಮರುದಿನ ಬೆಳಿಗ್ಗೆ ಇಟ್ಟಂಗಿಹಾಳ ಗ್ರಾಮದಲ್ಲಿ ಬಯಲು ಶೌಚಾಲಯದ ಕುರಿತು ಜನರಿಗೆ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.