ADVERTISEMENT

ಆರ್‌ಟಿಇ: ಮಕ್ಕಳಿಗೆ ಪರ್ಯಾಯ ವ್ಯವಸ್ಥೆ

ರಾಕೇಶ್‌ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2018, 6:31 IST
Last Updated 11 ಜೂನ್ 2018, 6:31 IST

ಕಕ್ಕೇರಾ: ಪಟ್ಟಣದ ರಾಕೇಶ್‌ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗೆ ಈಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನ ಓಲೇಕಾರ  ಭೇಟಿ ನೀಡಿ, ಶಾಲೆಯ ದಾಖಲೆಗಳ ಪರಿಶೀಲನೆ ನಡೆಸಿದರು.

‘ಇಲ್ಲಿನ ಶಾಲೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಶಾಲೆಯ →ವಸ್ತುಸ್ಥಿತಿಯ ಬಗ್ಗೆ ವರದಿ ತಯಾರಿಸಿ ಮೇಲಾಧಿಕಾರಿಗೆ →ನೀಡಲಾಗುವುದು’ ಎಂದು ಬಿಇಒ ನಾಗರತ್ನ ಓಲೇಕಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಆರ್‌ಟಿಇ ಅಡಿಯಲ್ಲಿ ಈ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೇರೆ ಶಾಲೆಯಲ್ಲಿ ದಾಖಲಾತಿಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ADVERTISEMENT

ಆರ್‌ಟಿಇ ಅಡಿಯಲ್ಲಿ ರಾಕೇಶ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗೆ ಆಯ್ಕೆಯಾದ ಮಕ್ಕಳ ಪರದಾಟದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ಆರ್‌ಟಿಇ ಶಾಲೆ ಪ್ರವೇಶಕ್ಕೆ ಅಲೆದಾಟ’ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು.

ಈರಪ್ಪ ಕನ್ನೆಳ್ಳಿ, ಭೀಮಣ್ಣ ನಾಯ್ಕೋಡಿ, ಬಾಲಕೃಷ್ಣ, ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.