ಗುರುಮಠಕಲ್: ಹೋಬಳಿ ಗ್ರಾಮಗಳಲ್ಲಿ ಗುರುವಾರ ರಾತ್ರಿ ಸುಮಾರು 2 ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದಿದೆ. ಹಿಂಗಾರು ಬಿತ್ತನೆಗೆ ಹದ ಗೊಳಿಸಲಾಗಿದ್ದ ಜಮೀನಿನಲ್ಲಿ ನೀರು ನಿಂತಿದ್ದು, ಇನ್ನೂ 20 ದಿನಗಳವರೆಗೆ ಹಿಂಗಾರು ಬಿತ್ತನೆಗೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ಕೃಷಿಕರಾದ ರಾಮಣ್ಣ ಹಾಗೂ ಯಲ್ಲಪ್ಪ.
ಇನ್ನೂ ಎರಡು ಮೂರು ದಿನ ಇದೇ ರೀತಿ ಮಳೆ ಬಿದ್ದರೆ ತೊಗರಿ ಬೆಳೆಗೆ ಹಾನಿಯಾಗುತ್ತದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.