ADVERTISEMENT

ಜೆಡಿಎಸ್‌ ತಳಮಟ್ಟದಿಂದ ಸಂಘಟಿಸಿ: ನಾಗನಗೌಡ ಕಂದಕೂರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 10:47 IST
Last Updated 5 ಅಕ್ಟೋಬರ್ 2017, 10:47 IST

ಯಾದಗಿರಿ: ‘ಜೆಡಿಎಸ್‌ನ ವಿವಿಧ ಘಟಕಗಳಿಗೆ ನೇಮಕವಾಗಿರುವ ಪದಾಧಿಕಾರಿಗಳು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ನಾಗನಗೌಡ ಕಂದಕೂರು ಸಲಹೆ ನೀಡಿದರು.

ನಗರದ ಸರ್ಕೀಟ್ ಹೌಸ್‌ನಲ್ಲಿ ಮಂಗಳವಾರ ನಡೆದ ಪಕ್ಷದ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪಕ್ಷದ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಬಡವರ, ರೈತರು ಹಾಗೂ ಯುವಕರ ಏಳಿಗೆಗಾಗಿ ರಾಜ್ಯಕ್ಕೆ ಜೆಡಿಎಸ್‌ನ ಅವಶ್ಯವಿದ್ದು, ಈ ಬಾರಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ, ನಾಡಿನ ಅಭಿವೃದ್ಧಿಗೆ ಮತ್ತೊಮ್ಮೆ ನಾಂದಿ ಹಾಡಬೇಕಿದೆ’ ಎಂದರು.

ADVERTISEMENT

‘ಕುಮಾರಸ್ವಾಮಿ ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಒಂದು ತಿಂಗಳ ವಿಶ್ರಾಂತಿಯ ನಂತರ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದ 50 ಕಡೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಯಾದಗಿರಿ ಜಿಲ್ಲೆಯಲ್ಲೂ ಗ್ರಾಮ ವಾಸ್ತವ್ಯ ಮಾಡುವರು’ ಎಂದು ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಅವರ ಆದೇಶದಂತೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜಿ. ತಮ್ಮಣ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹನುಮೇಗೌಡ ಬೀರನಕಲ್, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಸಿಯೋದ್ದೀನ್ ಆಸೀಂ ಹಾಗೂ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಶಿವಶಕರ ಮೋಟಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷ ನಾಗನಗೌಡ ಕಂದಕೂರ ಅವರು ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು.

ಚನ್ನಪ್ಪಗೌಡ ಮೋಸಂಬಿ, ಲಿಂಗಣಗೌಡ ಕೋಂಡಾಪೂರ, ರಾಜಶೇಖರಗೌಡ ವಡಗೇರಾ, ಅಜಯರೆಡ್ಡಿ ಎಲ್ಹೇರಿ, ಅನಿಲ ಕುಮಾರ ಹೆಡಗಿಮದ್ರಾ, ಸುಭಾಶ್ಚಂದ್ರ ಹೊನಗೆರಾ, ವಿಶ್ವನಾಥ , ನರಸಪ್ಪ ಬದ್ದೇಪಲ್ಲಿ, ಹಣಮಂತ್ರಾಯ ತೇಕ್ರಾಳ್, ಎಂ.ಜಿ.ಕೊಣ್ಣೂರು, ಸಂಗಾರೆಡ್ಡಿ ಸೈದಾಪುರ, ಶಿವಶಂಕರ ಶಿವರಾಯ, ಶರಣು ಅವಂಟಿ, ನರಸಪ್ಪ ಧನವಾಡ, ಭೀಮೇಶಪ್ಪ ಗುಡಸೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.