ಶಹಾಪುರ: ಸೋಮವಾರ ತಡರಾತ್ರಿಯಿಂದ ಸುರಿದ ಮಳೆಗೆ ತಾಲ್ಲೂಕಿನ ಮಡ್ನಾಳದಲ್ಲಿ ಮಂಗಳವಾರ ಗೋಡೆ ಕುಸಿದು ವೃದ್ಧ ಮೃತಪಟ್ಟಿದ್ದು, ಆರು ಮಕ್ಕಳು ಗಾಯಗೊಂಡಿದ್ದಾರೆ.
ಅಯ್ಯಪ್ಪ ಮರೆಪ್ಪ (80) ಮೃತರು. ಭೀಮಾಶಂಕರ, ಪರಶುರಾಮ, ಶರಣಪ್ಪ, ಅಮರೇಶ, ರಾಯಪ್ಪ, ಕಾಶಿನಾಥ ಗಾಯಗೊಂಡ ಮಕ್ಕಳು. ‘ಗೋಡೆಯ ಬದಿಯಲ್ಲಿ ಮಕ್ಕಳು ಆಟ ಆಡುತ್ತಿದ್ದಾಗ ಗೋಡೆ ಕುಸಿದು ಬಿದ್ದಿತು. ಮಣ್ಣಿನಲ್ಲಿ ಸಿಕ್ಕಿಕೊಂಡಿದ್ದ ಮಕ್ಕಳನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಅದರಲ್ಲಿ ಇಬ್ಬರು ಮಕ್ಕಳಿಗೆ ಕಾಲು ಮುರಿದಿದ್ದು, ಉಳಿದ ಮಕ್ಕಳ ತಲೆಗೆ ಪೆಟ್ಟು ಬಿದ್ದಿದೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಸೋಮಶೇಖರ ಹಾಗರಗುಂಡಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.