ADVERTISEMENT

ಮಾದಿಗ ಸಮುದಾಯಕ್ಕೆ ರಕ್ಷಣೆ ನೀಡಿ

ಅರಳಹಳ್ಳಿ ಗ್ರಾಮಸ್ಥರ ಮನವಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 10:45 IST
Last Updated 5 ಅಕ್ಟೋಬರ್ 2017, 10:45 IST

ಯಾದಗಿರಿ: ಸುರಪುರ ತಾಲ್ಲೂಕಿನ ಅರಳಹಳ್ಳಿ ಗ್ರಾಮದ ಮಾದಿಗ ಸಮುದಾಯಕ್ಕೆ ಸೂಕ್ತ ಪೊಲೀಸ್‌ ರಕ್ಷಣೆ ನೀಡುವಂತೆ ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮದ ಆರು ಜನರು ಮಾದಿಗ ಸಮುದಾಯದವರ ಮೇಲೆ ಅನ್ಯ ಸಮಾಜದವರು ಹಲ್ಲೆ ಮಾಡಿದ್ದಾರೆ. ಸುರಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ಮಾಡಿದ ಆರೋಪಿಗಳ ಸಂಬಂಧಿಕರು ನಮಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಇದರಿಂದ ಅಲ್ಲಿನ ಮಾದಿಗ ಸಮುದಾಯ ಭೀತಿಯಲ್ಲಿ ಕಾಲ ಕಳೆಯುವಂತೆ ಆಗಿದೆ ಎಂದು ಗ್ರಾಮದ ಸಾಮಪ್ಪ, ರಾಮಣ್ಣ, ಹೊಳೆಪ್ಪ, ಬಸಪ್ಪ, ಧರ್ಮಣ್ಣ, ಮಹಾದೇವ, ಮಹಾಲಿಂಗಪ್ಪ, ಭೀಮರಾಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT