ಶಹಾಪುರ: ರೈತರು ಬೆಳೆದ ತೊಗರಿಯನ್ನು ಖರೀದಿಸಬೇಕು ಎಂದು ಆಗ್ರಹಿಸಿ ಬುಧವಾರ ವಿವಿಧ ಗ್ರಾಮಗಳ ರೈತರು ಬೀದರ್–ಶ್ರೀರಂಗಪಟ್ಟಣದ ರಾಜ್ಯ ಹೆದ್ದಾರಿ ಮೇಲೆ ಟೈರ್ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದರು.
ಏಕಾಏಕಿ ರಸ್ತೆತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡಿದರು. ಉರಿ ಬಿಸಿಲು ಲೆಕ್ಕಿಸದೆ ರೈತರು ಹೆದ್ದಾರಿ ಮೇಲೆ ಧರಣಿ ನಡೆಸಿದರು.
ಆಗ ಸ್ಥಳದಲ್ಲಿ ಕೆಲಹೊತ್ತು ಗೊಂದಲ ಉಂಟಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿ ರೈತರ ಜತೆ ಸಂಧಾನ ನಡೆಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.