ADVERTISEMENT

‘ಸಮಾಜ ಒಡೆಯುವ ಛಿದ್ರಾಮಯ್ಯ’

ವಿರಾಟ್‌ ಹಿಂದೂ ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಲೇವಡಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 5:31 IST
Last Updated 26 ಮಾರ್ಚ್ 2018, 5:31 IST
ಯಾದಗಿರಿಯಲ್ಲಿ ಭಾನುವಾರ ನಡೆದ ವಿರಾಟ್ ಹಿಂದೂ ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಮಾತನಾಡಿದರು
ಯಾದಗಿರಿಯಲ್ಲಿ ಭಾನುವಾರ ನಡೆದ ವಿರಾಟ್ ಹಿಂದೂ ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಮಾತನಾಡಿದರು   

ಯಾದಗಿರಿ: ‘ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಛಿದ್ರಾಮಯ್ಯರಾಗಿ ಬದಲಾಗಿದ್ದಾರೆ’ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಲೇವಡಿ ಮಾಡಿದರು.

ನಗರದಲ್ಲಿ ಜಿಲ್ಲಾ ಹಿಂದೂ ಜಾಗರಣಾ ವೇದಿಕೆ ಹಮ್ಮಿಕೊಂಡಿದ್ದ ಹಿಂದೂ ವಿರಾಟ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ನಾವು ಧರ್ಮ ಮತ್ತು ಮನುಷ್ಯತ್ವದ ಬಗ್ಗೆ ಚರ್ಚೆ ಮಾಡುತ್ತಿದ್ದೆವು. ಆದರೆ, ಎಂದೂ ಜಾತಿಗಳ ಬಗ್ಗೆ ಚರ್ಚೆ ನಡೆಸಿರಲಿಲ್ಲ. ಈ ದೇಶದಲ್ಲಿ ಜಾತಿ, ಉಪ ಜಾತಿಗಳ ವಿಷಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್‌ ಶತಮಾನಗಳಿಂದಲೂ ಮಾಡುತ್ತಾ ಬಂದಿದೆ. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ಆ ಕೆಲಸ ಮುಂದುವರಿಸಿದ್ದಾರೆ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.