ADVERTISEMENT

 ಕೃಷ್ಣಾನದಿಗೆ 1.89 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 15:39 IST
Last Updated 5 ಆಗಸ್ಟ್ 2024, 15:39 IST
ನಾರಾಯಣಪುರ ಬಸವಸಾಗರ ಜಲಾಶಯದ 25 ಕ್ರಸ್ಟ ಗೇಟ್‌ಗಳಿಂದ ನೀರು ಧುಮ್ಮಿಕ್ಕುವ ರುದ್ರ ರಮಣೀಯ ದೃಶ್ಯ
ನಾರಾಯಣಪುರ ಬಸವಸಾಗರ ಜಲಾಶಯದ 25 ಕ್ರಸ್ಟ ಗೇಟ್‌ಗಳಿಂದ ನೀರು ಧುಮ್ಮಿಕ್ಕುವ ರುದ್ರ ರಮಣೀಯ ದೃಶ್ಯ    

ನಾರಾಯಣಪುರ: ಸೋಮವಾರ ಬಸವಸಾಗರ ಜಲಾಶಯದ 25 ಕ್ರಸ್ಟ ಗೇಟ್‌ಗಳಿಂದ ನದಿಕೆ 1.89 ಲಕ್ಷ ಕ್ಯುಸೆಕ್ ಹರಿಬಿಡಲಾಗಿದೆ.

ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆಗುತ್ತಿರುವದರಿಂದ ಒಳಹರಿವು ಕಡಿಮೆಯಾಗುತ್ತಿದೆ. ಬಸವ ಸಾಗರ ಜಲಾಶಯಕ್ಕೆ ಬರುತ್ತಿರುವ ಒಳಹರಿವನ್ನು ಗಮನಿಸಿ ಹೊರಹರಿವನ್ನು ಕಡಿಮೆ ಮಾಡಲಾಗುತ್ತಿದೆ. ಸೋಮವಾರ ಆಲಮಟ್ಟಿಯ ಶಾಸ್ತ್ರೀ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ 2.10 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗಿದೆ.

ಬಸವಸಾಗರ ಜಲಾಶಯದಲ್ಲಿ ಪ್ರಸ್ತುತ 27.688 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.