ಯಾದಗಿರಿ: ಜಿಲ್ಲೆಯ ಗುರಮಠಕಲ್ ತಾಲ್ಲೂಕಿನ ಕರಣಗಿ ಗ್ರಾಮದಲ್ಲಿ 1,030 ಲೀಟರ್ ಅಕ್ರಮ ಕಳ್ಳಭಟ್ಟಿಯನ್ನು ಅಬಕಾರಿ ಪೊಲೀಸರು ನಾಶಪಡಿಸಿದ್ದಾರೆ.
ಆರೋಪಿ ತಾಯಪ್ಪ ಶಿವಾನಂದ ಪರಾರಿಯಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾದಗಿರಿ ಅಬಕಾರಿ ಉಪ ಅಧೀಕ್ಷಕರ ಸೂಚನೆ ಮೇರೆಗೆ, ಉಪ ವಿಭಾಗ ಶಹಾಪುರ ಅಧಿಕಾರಿ ಬಸವರಾಜ ಜಾಮಗೊಂಡ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಚಂದ್ರಶೇಖರ, ಅನಿಲಕುಮಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.