ADVERTISEMENT

ಸರ್ಕಾರಿ ಆಸ್ಪತ್ರೆಗೆ 15 ಕಾನ್ಸಂಟ್ರೇಟರ್‌ ಕೊಡುಗೆ

​ಪ್ರಜಾವಾಣಿ ವಾರ್ತೆ
Published 19 ಮೇ 2021, 3:31 IST
Last Updated 19 ಮೇ 2021, 3:31 IST
ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಗೆ ಬಿಜೆಪಿ ಮುಖಂಡ ಅಮೀನರೆಡ್ಡಿ ಯಾಳಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಮಂಗಳವಾರ 15 ಆಮ್ಲಜನಕ ಕಾನ್ಸಂಟ್ರೇಟರ್‌ಗಳನ್ನು ನೀಡಲಾಯಿತು. ಅಮೀನರಡ್ಡಿ ಪಾಟೀಲ್ ಯಾಳಗಿ, ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಇದ್ದರು
ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಗೆ ಬಿಜೆಪಿ ಮುಖಂಡ ಅಮೀನರೆಡ್ಡಿ ಯಾಳಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಮಂಗಳವಾರ 15 ಆಮ್ಲಜನಕ ಕಾನ್ಸಂಟ್ರೇಟರ್‌ಗಳನ್ನು ನೀಡಲಾಯಿತು. ಅಮೀನರಡ್ಡಿ ಪಾಟೀಲ್ ಯಾಳಗಿ, ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಇದ್ದರು   

ಶಹಾಪುರ: ಬಿಜೆಪಿ ಮುಖಂಡ ಅಮೀನರೆಡ್ಡಿ ಪಾಟೀಲ ಯಾಳಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ₹7.50 ಲಕ್ಷ ವೆಚ್ಚದಲ್ಲಿ 15 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಯಿತು.

ನಂತರ ಮಾತನಾಡಿದ ಅಮೀನರೆಡ್ಡಿ ಪಾಟೀಲ ಅವರು, ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಇರುವುದಾಗಿ ತಿಳಿದುಬಂದಿತ್ತು. ರೋಗಿಗಳು ಆಮ್ಲಜನಕ ಕೊರತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ನಮ್ಮ ಟ್ರಸ್ಟ್ ವತಿಯಿಂದ 15 ಕಾನ್ಸಂಟ್ರೇಟರ್‌ಗಳನ್ನು ಕೊಡುಗೆಯಾಗಿ ನೀಡಲಾಗಿದೆ ಎಂದರು.

ಅಲ್ಲದೆ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರು, ಗೃಹರಕ್ಷಕ ದಳ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವರು ಇದ್ದ ಸ್ಥಳಕ್ಕೆ ತೆರಳಿ ಆಹಾರದ ಕಿಟ್ ನೀಡಲಾಗುವುದು ಎಂದು ಹೇಳಿದರು.

ADVERTISEMENT

ನಾವೆಲ್ಲರೂ ಅತ್ಯಂತ ಸಂಕಷ್ಟದಲ್ಲಿ ಇದ್ದೇವೆ. ಇಂತಹ ಸಂದರ್ಭದಲ್ಲಿ ದಾನಿಗಳು ತಮ್ಮ ಕೈಲಾದ ಮಟ್ಟಿಗೆ ನೆರವು ನೀಡಬೇಕು ಎಂದು ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ಮುಖಂಡರಾದ ಡಾ.ಚಂದ್ರಶೇಖರ ಸುಬೇದಾರ, ಬಸವರಾಜ ವಿಭೂತಿಹಳ್ಳಿ, ಯಲ್ಲಯ್ಯ ನಾಯಕ ವನದುರ್ಗ, ಬಸನಗೌಡ ಹಾರಣಗೇರಾ, ಮಾಣಿಕರೆಡ್ಡಿ ಮಲ್ಹಾರ, ಪ್ರಕಾಶರೆಡ್ಡಿ (ಗುಂಡು) ಯಾಳಗಿ, ರಾಜಶೇಖರ ಗೂಗಲ್, ಚೆಂದಪ್ಪ ಸೇರಿ ಸಗರ, ತಿರುಪತಿರೆಡ್ಡಿ ಪದರೆಡ್ಡಿ, ಮಹೇಶಗೌಡ ಆಲ್ದಾಳ, ಮಲ್ಲಿಕಾರ್ಜುನ ಕಂದಕೂರ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೆದಾರ, ಡಾ.ಮಲ್ಲಪ್ಪ ಕಣಜಿಗಿಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.