ADVERTISEMENT

ಹುಣಸಗಿ: 1.63 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 17:30 IST
Last Updated 14 ಅಕ್ಟೋಬರ್ 2020, 17:30 IST
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರದಿಂದ ಕೃಷ್ಣಾ ನದಿಗೆ 1.63 ಲಕ್ಷ ಕ್ಯುಸೆಕ್ ನೀರನ್ನು ಹರಿಸಲಾಯಿತು 
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರದಿಂದ ಕೃಷ್ಣಾ ನದಿಗೆ 1.63 ಲಕ್ಷ ಕ್ಯುಸೆಕ್ ನೀರನ್ನು ಹರಿಸಲಾಯಿತು    

ಹುಣಸಗಿ: ರಾಜ್ಯದ ಕೃಷ್ಣಾ ನದಿ ಪ್ರದೇಶದಲ್ಲಿ ಒಂದು ವಾರದಿಂದ ವ್ಯಾಪಕ ಮಳೆ ಕಾರಣ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮತ್ತೆ ನೀರು ಹರಿದು ಬರುತ್ತಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 85 ಸಾವಿರ ಕ್ಯುಸೆಕ್ ಇದ್ದ ಒಳ ಹರಿವು ಬುಧವಾರ ಬೆಳಿಗ್ಗೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಇದರಿಂದಾಗಿ ಸಂಜೆಯ ಹೊತ್ತಿಗೆ 22 ಗೇಟ್‌ಗಳ ಮುಖಾಂತರ 1.62 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT