ADVERTISEMENT

ಜಿಲ್ಲೆಯಲ್ಲಿ 9,96 ಲಕ್ಷ ಮತದಾರರು

ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಸಿದ್ದ: ಚೋಳನ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 2:29 IST
Last Updated 5 ಡಿಸೆಂಬರ್ 2020, 2:29 IST
ಯಾದಗಿರಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಪಂ ಚುನಾವಣೆ ನಿಮಿತ್ತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಸಭೆಯಲ್ಲಿ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಪಿ.ರಾಜೇಂದ್ರ ಚೋಳನ್ ಮಾತನಾಡಿದರು
ಯಾದಗಿರಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಪಂ ಚುನಾವಣೆ ನಿಮಿತ್ತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಸಭೆಯಲ್ಲಿ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಪಿ.ರಾಜೇಂದ್ರ ಚೋಳನ್ ಮಾತನಾಡಿದರು   

ಯಾದಗಿರಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲೂ ಮತದಾರರ ಅಂತಿಮ ಪಟ್ಟಿ ಸಿದ್ಧವಾಗಿದ್ದು, 9,96,446 ಮತದಾರರು ಈ ಬಾರಿಯ ಗ್ರಾಮ ಪಂಚಾಯಿತಿಚುನಾವಣೆಯಲ್ಲಿ 2,291 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಉತ್ಸುಕರಾಗಿದ್ದಾರೆ ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಪಿ.ರಾಜೇಂದ್ರ ಚೋಳನ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಪಂ ಚುನಾವಣೆ ನಿಮಿತ್ತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 199 ಗ್ರಾಮ ಪಂಚಾಯಿತಿಗಳಿದ್ದು, ಯಾದಗಿರಿ, ಗುರುಮಠಕಲ್, ಶಹಾಪುರ, ವಡಗೇರಾ, ಸುರಪುರ, ಹುಣಸಗಿ ತಾಲ್ಲೂಕುಗಳ ಗ್ರಾಪಂ ಚುನಾವಣೆಗೆ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 4,97,902 ಪುರುಷ ಹಾಗೂ 4,98,534 ಮಹಿಳೆಯರು ಸೇರಿದಂತೆ ಒಟ್ಟು 9,96,436 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 2,291 ಅಭ್ಯರ್ಥಿಗಳ ಆಯ್ಕೆಯಾಗಲಿದ್ದಾರೆ ಎಂದುಹೇಳಿದರು.

ADVERTISEMENT

22 ಗ್ರಾಮ ಪಂಚಾಯಿತಿಗಳನ್ನು ಹೊಂದಿರುವ ಯಾದಗಿರಿ ತಾಲ್ಲೂಕು 1,57,555 ಮತದಾರರನ್ನು ಹೊಂದಿದ್ದರೆ, 17 ಗ್ರಾಪಂ ಒಳಗೊಂಡಿರುವ ಗುರುಮಠಕಲ್ ತಾಲೂಕು 1,06,109 ಮತದಾರರನ್ನು ಹೊಂದಿದೆ.

ಶಹಾಪೂರು ತಾಲ್ಲೂಕು 24 ಗ್ರಾ.ಪಂ ಹೊಂದಿದ್ದು, ಒಟ್ಟು 1,57,596 ಮತದಾರರನ್ನು ಒಳಗೊಂಡಿದೆ. ವಡಗೇರಾ ತಾಲೂಕು 17 ಗ್ರಾ.ಪಂ 94,991 ಮತದಾರರನ್ನು ಹೊಂದಿದೆ. ಸುರಪುರ ತಾಲ್ಲೂಕು 21 ಗ್ರಾ.ಪಂ ಇದ್ದು ಒಟ್ಟು 1,19,332 ಮತದಾರರ ಒಳಗೊಂಡರೆ ಹುಣಸಗಿ ತಾಲ್ಲೂಕು 18 ಗ್ರಾ.ಪಂ ಒಳಗೊಂಡಿದ್ದು, ಒಟ್ಟು 1,15,744 ಮತದಾರರ ಪಟ್ಟಿಯನ್ನು ಒಳಗೊಂಡಿದೆ ಎಂದು ಹೇಳಿದರು.

ಚುನಾವಣಾ ಆಯೋಗದ ನಿರ್ದೇಶನ:

ಜಿಲ್ಲೆಯ ಗ್ರಾಮ ಪಂಚಾಯಿತಿಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಆಯೋಗದ ಸೂಚನೆಯಂತೆ ಮತದಾರರ ಪಟ್ಟಿ ಅಂತಿಮಗೊಳಿಸುವುದು ಸೇರಿದಂತೆಹಲವು ಸಿದ್ದತಾ ಕಾರ್ಯಗಳು ನಡೆದಿವೆ. ಚುನಾವಣೆ ಕರ್ತವ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳಿಗೆ ವಿವಿಧ ರೀತಿಯ ತರಬೇತಿಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾಆರ್., ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಶರ್ಮಾ,ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಉಪವಿಭಾಗಾಧಿಕಾರಿಶಂಕರಗೌಡ ಸೋಮನಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಸೇರಿದಂತೆ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.